BIG NEWS: ರಾಜ್ಯಾದ್ಯಂತ ಗಣೇಶೋತ್ಸವ, ಈದ್ ಮಿಲಾದ್ ಹಬ್ಬದ ವೇಳೆ 'DJ' ನಿಷೇಧ : ರಾಜ್ಯ ಸರಕಾರ ಆದೇಶ
ಇದೇ ತಿಂಗಳು 27 ರಿಂದ ಗಣೇಶ ಚತುರ್ಥಿ ಆರಂಭವಾಗಲಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ಸುಮಾರು ಒಂದು ವಾರಕ್ಕೂ ಹೆಚ್ಚು ದಿನ ಪೂಜೆ ಮಾಡಿ ಬಳಿಕ ವಿಸರ್ಜನೆ ಮಾಡಲಾಗುತ್ತದೆ. ಇದರ ಬೆನ್ನಲ್ಲೇ ಸೆ. 5 ರಿಂದ ಮುಸ್ಲಿಮರ ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.
ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿ ಹಬ್ಬವನ್ನು ಕೆಲವೆಡೆ ಸುಮಾರು 15 ದಿನಗಳ ಕಾಲ ಆಚರಿಸಲಾಗುತ್ತದೆ. ಜೊತೆಗೆ ವಿಸರ್ಜನೆ ಮಾಡುವ ವೇಳೆ ಡಿಜೆ ಹಾಕಿ ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಗುತ್ತದೆ. ಇನ್ನು ಮುಸ್ಲಿಮರ ಈದ್ ಮಿಲಾದ್ ಆಚರಣೆ ಕೂಡ ಸೆ.5 ರಿಂದ ಸೆ.10 ರ ವರೆಗೆ ಆಚರಿಸಲಾಗುತ್ತದೆ.
ಹೀಗಾಗಿ ಎರಡು ಹಬ್ಬಗಳ ಆಚರಣೆ ನಡೆಸುವ ವೇಳೆ ಯಾವುದೇ ರೀತಿಯ ದುರ್ಘಟನೆ ನಡೆಯದಂತೆ, ಹಾಗೂ ಡಿಜೆ ಸಿಸ್ಟಂ ಉಪಯೋಗದಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುತ್ತದೆ
ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆ. 27 ರಿಂದ ಸೆ. 15 ರ ವರೆಗೆ ಯಾವುದೇ ಡಿಜೆ ಸಿಸ್ಟಂಗಳನ್ನು ಬಳಸದಂತೆ ಆಯಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊAದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಣೇಶ ಕೂರಿಸಲು ಮಾರ್ಗಸೂಚಿಗಳೇನು?
- ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ
- ಚಪ್ಪರ, ಶಾಮಿಯಾನ, ಪೆಂಡಾಲ್ ಗೆ ವಿಶೇಷ ಅನುಮತಿ ಪಡೆಯಬೇಕು.
- ಗಣೇಶ ಮೂರ್ತಿ ಮೆರವಣಿಗೆ ವೇಳೆ ಅಹಿಕತರ ಘಟನೆ ನಡೆದರೆ ಅದಕ್ಕೆ ಸಂಘಟಕರೇ ಹೊಣೆ.
- ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಿಸಬೇಕು.
- ಗಣೇಶ ಕೂರಿಸುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು.
- ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ NOC ಕಡ್ಡಾಯ.
- ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ ನೀಡಲಾಗಿದೆ.
- ಯಾವುದೇ ಕಾರಣಕ್ಕೂ ಡಿಜೆ (DJ) ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ.
- ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧಿಸಲಾಗಿದೆ.