ಪುತ್ತೂರು: ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ…!
ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯ್ಕ ಅವರು ನ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ಕಬಕ ನಿವಾಸಿಯಾಗಿರುವ ಶ್ರೀಧರ್ ನಾಯ್ಕ ಅವರು ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು.
ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ