BREAKING ಪುತ್ತೂರು : ನಾಪತ್ತೆಯಾಗಿದ್ದ ಯುವಕ ಬದ್ರುದ್ದೀನ್ ಶವವಾಗಿ ಪತ್ತೆ..!
ಪುತ್ತೂರು: ನಾಪತ್ತೆಯಾಗಿದ್ದ ಬದ್ರುದ್ದೀನ್ ಡಿಕೆ (27) ಮೃತದೇಹ ನೇಡಿಯಾವು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.
ಬದ್ರುದ್ದೀನ್ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು,
ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದ್ದು, ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಫೋಟೋ ಮತ್ತು ಇವರಗಳೊಂದಿಗೆ ನಾಪತ್ತೆಯಾದ ಪೋಸ್ಟರ್ಗಳು ರವಾನೆಗೊಂಡಿತ್ತು.
ಇದೀಗ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.
ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದು ತನಿಖೆ ಆರಂಭಿಸಿದ್ದಾರೆ.